janamanakannada > Blog > Latest > Mysore > ಶಾಸಕ ಡಿ. ರವಿಶಂಕರ್ ಮತ್ತು ಕಾಂಗ್ರೆಸ್ ಮುಖಂಡರಿಂದ ಸತೀಶ್ ಜಾರಕಿಹೊಳಿರವರಿಗೆ ಅಭಿನಂದನೆ ಸಲ್ಲಿಕೆ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು.
ಈ ವೇಳೆ ಕೆ.ಆರ್.ನಗರ ವಿದಾನ ಸಭಾ ಕ್ಷೇತ್ರದ ಶಾಸಕ ಡಿ.ರವಿಶಂಕರ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡ, ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಸೂಪರ್ ಮಹದೇವನಾಯಕ, ಸಾಲಿಗ್ರಾಮ ತಾಲೂಕು ಘಟಕದ ಅಧ್ಯಕ್ಷ ನರಸಿಂಹನಾಯಕ ಮತ್ತು ಯುವ ಕಾಂಗ್ರೆಸ್ ಮುಖಂಡ ಮುಂಜನಹಳ್ಳಿ ಸಚಿನ್ ಮತ್ತಿತರರು ಇದ್ದರು.
ವೀರಶೈವ ಮಹಾ ಸಭಾದ ಅಧ್ಯಕ್ಷ ಸಿ.ಪಿ.ರಮೇಶ್ ಕುಮಾರ್ ಗೆ ಅಭಿನಂದನೆ

ಕೆ.ಆರ್.ನಗರ ತಾಲೂಕು ಅಖಿಲ ಭಾರತ ಲಿಂಗಾಯಿತ ವೀರಶೈವ ಮಹಾ ಸಭಾದ ಅಧ್ಯಕ್ಷ ಸಿ.ಪಿ.ರಮೇಶ್ ಕುಮಾರ್ ಅವರನ್ನು ಗಾವಡಗೆರೆ ಜಿ.ಪಂ.ಕ್ಷೇತ್ರದ ಮಾಜಿ ಸದಸ್ಯ ಜಾಬಗೆರೆರಮೇಶ್ ಅಭಿನಂದಿಸಿದರು.
ಅರಕೆರೆ ವಿರಕ್ತ ಮಠದ ಸಿದ್ದೇಶ್ವರ ಶ್ರೀಗಳು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎ.ಎಲ್. ಜ್ಞಾನಾನಂದ , ನಿರ್ದೇಶಕ ಕುಪ್ಪೆಮಹದೇವಸ್ವಾಮಿ, ವೀರಶೈವ ಮುಖಂಡ ಕೊಳವಿಗೆ ಶಶಿ ಇದ್ದರು.
Tags:k rnagar news
admin








