Latest

ಇಂದಿನ (18-07-2026 ಶನಿವಾರ) ಪಂಚಾಂಗ… ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ?

ಕೇರಳ ಶ್ರೀ ಆದಿಶಕ್ತಿ ಜೋತಿಷ್ಯರಾದ ಪಂಡಿತ್ ಶ್ರೀ ಮಂಜುನಾಥಶಾಸ್ತ್ರಿ

ಸಂವತ್ಸರ: ಶ್ರೀ ಪರಾಭವ ನಾಮ ಅಯನ: ದಕ್ಷಿಣಾಯಣ, ಋತು: ಗ್ರೀಷ್ಮ ಮಾಸ: ಆಷಾಢ  ಪಕ್ಷ: ಶುಕ್ಲ ಸೂರ್ಯೋದಯ: 5:54  ಸೂರ್ಯಾಸ್ತ: 6:49  ತಿಥಿ: ಪಂಚಮಿ, ಷಷ್ಠಿ ನಕ್ಷತ್ರ: ಪುಬ್ಬೆ, ಉತ್ತರೆ,  ಯೋಗ: ವರಿಯಾನ್  ಕರಣ: ಬವ, ಬಾಲವ  ರಾಹು ಕಾಲ: 9:08 -10:45  ಯಮಗಂಡ: 1:59-3:36 ಗುಳಿಕ ಕಾಲ-5:54-7:31 ದಿನಾಂಕ: 18-07-2026 ಶನಿವಾರ

ದ್ವಾದಶ ರಾಶಿಗಳ ಫಲಾಫಲಗಳು ಇಲ್ಲಿವೆ…

ಮೇಷ

ಹಣದ ಹರಿವು ತಕ್ಕಮಟ್ಟಿಗೆ ವೇಗವನ್ನು ಪಡೆಯಲಿದೆ.ಕೆಟ್ಟ ಆರೋಗ್ಯವನ್ನು ಸರಿ ಮಾಡಿಕೊಳ್ಳಿ. ಯಾರ ಸಹಾಯವನ್ನೂ ಅತಿಯಾಗಿ ನಿರೀಕ್ಷಿಸಲಾರಿರಿ. ಪ್ರೀತಿಪಾತ್ರರ ವರ್ತನೆಯು ನಿಮಗೆ ಹಿಂಸೆಯನ್ನು ಕೊಟ್ಟೀತು. ಕಛೇರಿಯ ಕೆಲಸಗಳು ಸಲೀಸಾಗಿ ಆಗುವುದು. ಯಾರದೋ ಮಾತಿಗೆ ಕುಣಿಯುವುದು ಬೇಡ. ನಿಮ್ಮ ಮನಸ್ಸಿಗೆ ಸರಿ ಎನಿಸಿದ್ದರೆ ಮುಂದುವರಿಯಿರಿ. ವ್ಯವಹಾರದ ವಿಚಾರದಲ್ಲಿ ನಿಮಗೆ ಅಳುಕು ಕಾಣಿಸುವುದು. ಯಾರೊಂದಿಗೂ ನಿರ್ದಯೆಯಿಂದ ವ್ಯವಹರಿಸುವುದು ಬೇಡ.

ವೃಷಭ

ಇಂದು ನಿಮಗೆ ಪ್ರಾಪ್ತವಾದ ಸ್ಥಾನದಿಂದ ನಿಮ್ಮ ಆಲೋಚನಾ ಕ್ರಮಗಳೂ ವ್ಯತ್ಯಾಸವಾಗುವುದು. ಸಣ್ಣ ಪುಟ್ಟ ನೋವುಗಳೂ ನಗುವಿನ ಜೊತೆ ಕರಗಲಿ. ಸ್ನೇತರ ಜೊತೆ ಸುತ್ತಡಿ ಹಣವನ್ನು ಖರ್ಚು ಮಾಡುವಿರಿ. ಇದು ಸಂತೋಷದಿಂದ ಮಾಡಿದ್ದಾಗಿರುತ್ತದೆ. ವಿಶೇಷವಾದ ಸ್ಥಾನ, ಮಾನಗಳು ಬರುವ ಸಾಧ್ಯತೆ ಇದೆ. ಅಸತ್ಯವನ್ನು ಹೇಳುವುದು ಗೊತ್ತಾದೀತು. ಹಿತವಚನದಿಂದ ಯಾವ ಪರಿವರ್ತನೆಯೂ ಆಗದು. ಒಂಟಿಯಾಗಿ ಕೆಲಸವನ್ನು ಮಾಡದೇ ಒಗ್ಗಟ್ಟಿನ ಕೆಲಸದಲ್ಲಿ ಜಯವಿರಲಿದೆ.

ಮಿಥುನ

ಇಂದು ನಿಮ್ಮ ಅನುಭವದ ಆಧಾರದ ಯೋಗ್ಯವಾದ ಕೆಲವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮಕ್ಕಳ ಯಶಸ್ಸಿನಿಂದಾಗಿ ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಇಂದಿನ ಕೆಲಸವನ್ನು ಪೂರೈಸಲು ಅನಾರೋಗ್ಯವು ಅಡ್ಡವಾಗಬಹುದು. ಒಂದೇ ಆದಾಯವನ್ನು ನಂಬಿದವರಿಗೆ ಕಷ್ಟವಾದೀತು. ನಿಮ್ಮ‌ ಮೇಲೆ ಸಂದೇಹವು ಬರಬಹುದು. ಭವಿಷ್ಯದ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುವಿರಿ. ನಿಮ್ಮ ಮನೆಯ ಸಮಸ್ಯೆಯನ್ನು ಬೇರೆಯವರ ಜೊತೆ ಹಂಚಿಕೊಳ್ಳುವುದು ಬೇಡ.

ಕರ್ಕಾಟಕ

ಹಳೆಯ ನೋವನ್ನು ಸ್ಮರಿಸಿಕೊಳ್ಳುವುದು ಬೇಡ. ಆದಯಾದ ಮೂಲವನ್ನು ಹುಡುಕಿಕೊಳ್ಳುವಿರಿ. ಮನೆಗೆ ಹಣದ ಸಹಾಯ ಮಾಡಬೇಕಾದ ಸ್ಥಿತಿ ಬರಬಹುದು. ನಿಮ್ಮವರ ಗೌಪ್ಯತೆಯನ್ನು ಕಾಪಾಡಿಕೊಳ್ಳಿ. ಇಲ್ಲವಾದರೆ ಅವಮಾನವಾದೀತು. ಮಾತಿನಿಂದ ಗೆಲ್ಲುವುದು ಸುಲಭವಾಗದು. ನಿಮ್ಮದಲ್ಲದ್ದನ್ನು ಉಳಿಸಿಕೊಳ್ಳುವುದು ಕಷ್ಟವಾಗುವುದು. ವೃತ್ತಿಯ ಬಗ್ಗೆ ನಿಮ್ಮಲ್ಲಿ ಹಲವು ಗೊಂದಲಗಳು ಕಾಣಿಸುವುದು. ಇಂದು ನೀವು ಯಾವುದಾದರೂ ವಿಚಾರವನ್ನು ಮಾತಿನಿಂದ ಗೆಲ್ಲವುದು ಸುಲಭವಲ್ಲ.

ಸಿಂಹ

ಅವಸರದಲ್ಲಿ ಪ್ರಯಾಣವನ್ನು ಮಾಡಬೇಡಿ. ಸಾವಧಾನತೆವಿರಲಿ. ಕೇಳಿದವರಿಗೆ ಆಗದು ಎಂದು ಹೇಳದೇ ಇರುವುದನ್ನು ಕೊಡಿ. ಸಂತೃಪ್ತಿಯು ನಿಮಗೆ ಸಿಗಬಹುದು. ಸಂಗಾತಿಯ ಆಸೆಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ. ಯಾರದೋ ಕೋಪ ನಿಮ್ಮ ಕಡಗೆ ತಿರುಗುವುದು. ದಿನವನ್ನು ಸುಂದರವಾಗಿ ಮಾಡಿಕೊಳ್ಳಲು ಮೊದಲೇ ಯೋಚಿಸಿ. ನಿಮ್ಮ ಪ್ರತಿಕ್ರಿಯೆ ಅಧಿಕಾರಿವರ್ಗದಿಂದ ನಿಮ್ಮ ಗೌರವಕ್ಕೆ ದಕ್ಕೆ ಆಗಬಹುದು. ಸಂಗಾತಿಯ ಇಂಗಿತವನ್ನೇ ಅರಿತು ಕಾರ್ಯವನ್ನು ಮಾಡುವಿರಿ.

ಕನ್ಯಾ

ಹಣದ ಸಮಸ್ಯೆಗಳು ತಾನಾಗಿಯೇ ನಿವಾರಣೆಯಾಗುವುದು. ವಿವಾಹಕ್ಕೆ ಕಾಣದವರಿಂದ ಅಡತಡೆ ಬರುವುದು. ನಿಮ್ಮವರ ಬಗ್ಗೆ ದೂರು ಕೊಡಬಹುದು ನಿಮ್ಮ ಬಳಿ.‌ ಅದನ್ನು ಸಮಾಧಾನ ಚಿತ್ತದಿಂದ ಸ್ವೀಕರಿಸಿ. ಸ್ವಚ್ಛಂದತೆಯಿಂದ ತಪ್ಪುಗಳು ನಡೆಯಬಹುದು. ಪಾಲುದಾರಿಕೆಯಲ್ಲಿ ಹೊಸ ಕಾರ್ಯಗಳನ್ನು ಆರಂಭಿಸಲು ಆಲೋಚಿಸುವಿರಿ‌.ದೂರ ಹೋಗುವವರಿದ್ದರೆ ಹಿರಿಯರ ಆಶೀರ್ವಾದವನ್ನು ಪಡೆದುಕೊಳ್ಳಿ. ಸಂಗಾತಿಯು ನಿಮ್ಮ ಜೊತೆ ಜಗಳವಾಡಿ ಹಳೆಯ ವಿಚಾರವನ್ನು ಪುನಃ ಪ್ರಸ್ತಾಪಿಸಬಹುದು.

ತುಲಾ

ಮಾನಸಿಕವಾದ ಯಾವ ಕ್ಷೋಭೆಯನ್ನೂ ಮನಸ್ಸಿಗೆ ತಂದುಕೊಳ್ಳದೇ ಚಿತ್ತವಿಶ್ರಾಂತಿಯನ್ನೂ ಕೊಡಿ. ಹಳೆಯ ಸ್ನೇಹಿತರು ನಿಮ್ಮನ್ನು ಅಕಸ್ಮಾತ್ ಭೇಟಿಯಾಗಬಹುದು. ಸಂಗಾತಿಯು ನಿಮ್ಮ ಪೂರ್ವವೃತ್ತಾಂತವನ್ನು ಹೇಳಬಹುದು. ನೀವಾಗಿಯೇ ವ್ಯಕ್ತಿಗಳನ್ನು ಬಿಟ್ಟುಕೊಳ್ಳುವಿರಿ. ಕೆಲಸವನ್ನು ಬದಲಿಸುವ ಯೋಚನೆ ಇರಲಿದೆ. ಹೊಸ ಸಂಗತಿಗಳನ್ನು ಕಲಿಯುವಿರಿ. ನಿಮ್ಮ ನಿರ್ಧಾರವನ್ನು ಯಾರು ಏನೇ ಹೇಳಿದರೂ ಬದಲಾಯಿಸುವುದಿಲ್ಲ. ಉದ್ಯೋಗದಲ್ಲಿ ಗಾಂಭೀರ್ಯವಿರಲಿದೆ. ಸರಿಯಾದ ವಿವೇಚನೆಯಿಂದ ಕಾರ್ಯವನ್ನು ನಿರ್ವಹಿಸುವಿರಿ.

ವೃಶ್ಚಿಕ

ದೂರ ಪ್ರಯಾಣ ಇಂದು ಬದಲಾಗುವುದು. ಇನ್ನೊಬ್ಬರ ಪ್ರಭಾವದ ಮೇಲೆ ನೀವು ಕೆಲಸವನ್ನು ಪಡೆಯುವಿರಿ. ಆಪ್ತರಿಂದ ಅನಿರೀಕ್ಷಿತ ಪಾರಿತೋಷಕಗಳು ಸಿಗಬಹುದು. ಕೃಷಿಯ ಬಗ್ಗೆ ಆಸಕ್ತಿ ಇರುವುದು. ಸಂಗಾತಿಯನ್ನು ಮಾತಿನಿಂದ ನೋಯಿಸುವಿರಿ. ಮನಸ್ಸನ್ನು ಅರ್ಥಮಾಡಿಕೊಂಡು ಬೇರೆಯವರ ಜೊತೆ ವ್ಯವಹಾರ ಮಾಡಿ. ಉದ್ಯಮದಲ್ಲಿ ಸಣ್ಣ ಪ್ರಗತಿ ಇರಬಹುದು. ಭಾವನಾತ್ಮಕ ವಿಚಾರಗಳಿಗೆ ಸ್ಪಂದಿಸುವುದು ಕಷ್ಟವಾಗಲವಾಗಲಿದೆ. ನಿಮ್ಮವರ ಮಾತುಗಳಿಂದ ನೀವು ಬೇಸರಗೊಳ್ಳುವಿರಿ.

ಧನು

ಸಂತೋಷವಾಗಿರಲು ಎಲ್ಲ ಯೋಜನೆಗಳನ್ನು ಸಿದ್ಧಪಡಿಸಿದರೂ ಅದು ವ್ಯತ್ಯಾಸ ಆಗಬಹುದು. ಅಥವಾ ಇನ್ನೇನೋ ಆಗಬಹುದು. ಇಂದಿನ ಸಿಟ್ಟು ನಿಮ್ಮ ಜೀವನಕ್ಕೆ ಬೇಡವಾಗಿರುವುದು. ಅದು ಬೇರೆ ರೂಪವನ್ನು ಪಡೆಯಬಹುದು. ಕಿರಿಯರ ಭಾವನೆ ಸ್ಪಂದಿಸುವಿರಿ. ನಿರಂತರ ಶ್ರಮದಿಂದ ಆಯಾಸವಾದ ನಿಮಗೆ ಇಂದು ಸ್ವಲ್ಪ ಬಿಡುಗಡೆಯಂತೆ ತೋರುವುದು‌. ದೇವರ ಕಾರ್ಯದಲ್ಲಿ ತೊಡಗುವಿರಿ. ಇಂದಿನ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು.

ಮಕರ

ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮನಸ್ಸು ನಿಮ್ಮಲ್ಲಿರಲಿದೆ. ಸಾಮಾಜಿಕ ಕಾರ್ಯಕ್ಕೆ ಹಲವರಿಂದ ಒತ್ತಡ ಸಿಗಬಹುದು. ಹಣವು ವ್ಯಯವಾಗುವ ಸಾಧ್ಯತೆ ಇದೆ‌. ನಿಮ್ಮ ಕನಸುಗಳು ನಿನಗೆ ಉತ್ಸಾಹವನ್ನು ತಂದುಕೊಡುತ್ತವೆ. ಪ್ರೀತಿಯಿಂದ ಎಲ್ಲರನ್ನೂ ಮಾತನಾಡಿಸುವಿರಿ. ನಿಮ್ಮ ಆಲೋಚನೆಗಳು ಇಷ್ಟವಾದೀತು. ಸಾಹಸಕ್ಕೆ ಆದಷ್ಟು ಕೈ ಹಾಕುವುದು ಬೇಡ. ಹೊಸತರ ಕಲಿಕೆಯಲ್ಲಿ ಆಸಕ್ತಿಯು ಅಧಿಕವಾಗುವುದು.

ಕುಂಭ

ನಿಮ್ಮ ಇಂದಿನ‌ ಯೋಜನೆಗಳು ತಲೆಕೆಳಗಾಗುವುದು. ಮನೆಗೆ ಸಂಬಂಧಿಸಿದಂತೆ ಸರಿಯಾದ ಖರ್ಚುಗಳ ಮಾಹಿತಿ ಇಲ್ಲದೇ ಅಧಿಕ ಖರ್ಚನ್ನು ಮಾಡಬೇಕಾಗಿಬರಬಹುದು. ಎಲ್ಲರ ಮಾತುಗಳು ನಿಮಗೆ ಕರ್ಣಕಠೋರವಾದೀತು. ಎಲ್ಲವೂ ಘಟಿಸಿ ಮೇಲೆ ಪಶ್ಚಾತ್ತಾಪ ಪಡುವುದರಿಂದ ಫಲ ಸಿಗದು. ನಿಮ್ಮನ್ನು ನಂಬಿದವರಿಗೆ ಏನಾದರೂ ಒಂದು ದಾರಿ ಮಾಡಿಕೊಡಬೇಕಾಗುವುದು. ತಂತ್ರಜ್ಞರು ವಹಿಸಿಕೊಂಡ ಕಾರ್ಯದ ಗಡುವುದು ಸಮೀಪಿಸಿದ್ದು, ತುರ್ತು ಕಾರ್ಯವನ್ನು ಮಾಡಬೇಕಿದೆ.

ಮೀನ

ಇತರರ ಸಲಹೆಗಳನ್ನು ಕೇಳಿ, ನಿಮಗೆ ಸರಿಯಾದೃ ಮಾತ್ರ ಮುಂದುವರಿಯಿರಿ. ನಿಮಗೆ ಉತ್ತಮ ಅವಕಾಶಗಳು ಸಿಗಲಿವೆ. ಆಪ್ತರ ಜೊತೆ ನಿಮ್ಮ ಸುಖ ದುಃಖಗಳನ್ನು ಹಂಚಿಕೊಳ್ಳುವಿರಿ. ಅಪರಿಚತವಾದ ಹುದ್ದೆಗಳನ್ನು ಅನಿವಾರ್ಯವಾಗಿ ಅಲಂಕರಿಸಬೇಕಾದೀತು. ಆಸ್ತಿಯ ಇಬ್ಬಾಗಕ್ಕೆ ಸಹಿ ಹಾಕಲೇಬೇಕಾದೀತು. ಅತಿಯಾದ ನಗುವು ಬೇಡ. ಕಳೆದುಕೊಂಡವರ ಬಗ್ಗೆ ಪಶ್ಚಾತ್ತಾಪ‌ ಇರಲಿದೆ. ಆರ್ಥಿಕ ಒತ್ತಡದಿಂದ ನೀವು ಹೊರಬರುವ ಮಾರ್ಗವನ್ನು ಹುಡುಕುವಿರಿ.

admin
the authoradmin

Leave a Reply