Latest

ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್ ಅವರನ್ನು ಅಭಿನಂದಿಸಿದ ಆರ್.ವಿನೋದ್ ಉಪ್ಪಾರ್

ಮೈಸೂರು: ನಗರ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿಯಾಗಿ ನೂತನವಾಗಿ ನೇಮಕಗೊಂಡಿರುವ ಆರ್.ವಿನೋದ್ ಉಪ್ಪಾರ್ ಅವರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮೈಸೂರು ನಗರ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ಎನ್.ಆರ್ ನಾಗೇಶ್, ಸಂಘಟನಾ ಕಾರ್ಯದರ್ಶಿಯಾದ ಶ್ರೀಕಾಂತ್ ಯಾದವ್, ಮುಖಂಡರಾದ ವಿಜಯ್ ಕುಮಾರ್, ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಜೆ.ವಿನಯ್ ಕುಮಾರ್, ಆಶ್ರಯ ಸಮಿತಿ ಸದಸ್ಯರಾದ ಗುಣಶೇಖರ್ ಮತ್ತಿತರರು ಇದ್ದರು.

admin
the authoradmin

Leave a Reply

Translate to any language you want