ಮೈಸೂರು ದಸರಾ ಮಹೋತ್ಸವವನ್ನು ನಿರ್ಮಲಾನಂದನಾಥ ಸ್ವಾಮೀಜಿಯವರು ಉದ್ಘಾಟಿಸಲಿ…
ಕರ್ನಾಟಕ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ಚಂದ್ರು ಮಂಡ್ಯ ಒತ್ತಾಯ

ಮೈಸೂರು: ನಾಡಿನ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ತ್ರಿವಿಧ ದಾಸೋಹಿಗಳಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಉದ್ಘಾಟಿಸಲಿ ಎಂದು ಕರ್ನಾಟಕ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ಚಂದ್ರು ಮಂಡ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪರಮಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಆಧ್ಯಾತ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಮಾನವೀಯ ಸೇವೆಗಳ ಮೂಲಕ ಜನರಲ್ಲಿ ಮೌಲ್ಯಾಧಾರಿತ ಬದುಕಿನ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಸಮಾಜದ ಸರ್ವಾಂಗೀಣ ಅಭಿವೃದ್ಧಿ, ಧಾರ್ಮಿಕ ಸಾಮರಸ್ಯ ಹಾಗೂ ಸೇವಾ ಮನೋಭಾವ ಬೆಳೆಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ.
ಧರ್ಮ-ಸಂಸ್ಕೃತಿಯ ಸಂರಕ್ಷಣೆಯಲ್ಲಿ ಸಲ್ಲಿಸುತ್ತಿರುವ ಸೇವೆ ಅಪಾರ ಗೌರವಕ್ಕೆ ಪಾತ್ರವಾಗಿದೆ. ಅವರ ಸಂದೇಶಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ, ನೈತಿಕತೆ ಮತ್ತು ಸೇವಾಭಾವವನ್ನು ಬೆಳೆಸುವಲ್ಲಿ ಪ್ರೇರಣೆಯಾಗಿವೆ.

ಇಂತಹ ಗೌರವಾನ್ವಿತ ಆಧ್ಯಾತ್ಮಿಕ ಮಹನೀಯರ ಶುಭಹಸ್ತದಿಂದ ನಾಡಹಬ್ಬಕ್ಕೆ ಚಾಲನೆ ದೊರೆತರೆ ದಸರಾ ಮಹೋತ್ಸವದ ಗೌರವ ಮತ್ತಷ್ಟು ಹೆಚ್ಚುವುದಲ್ಲದೆ, ರಾಜ್ಯದ ಸಾಂಸ್ಕೃತಿಕ ಪರಂಪರೆ ಮತ್ತು ಮಾನವೀಯ ಮೌಲ್ಯಗಳಿಗೆ ಇನ್ನಷ್ಟು ಮೆರುಗು ಸಿಗಲಿದೆ. ಆದ್ದರಿಂದ ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಪರಮಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಉದ್ಘಾಟಿಸಲಿ ಎಂದು ಸರ್ಕಾರಕ್ಕೆ ಕರ್ನಾಟಕ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ಚಂದ್ರು ಮಂಡ್ಯ ಒತ್ತಾಯಿಸಿದ್ದಾರೆ








A large percentage of of the things you say is astonishingly appropriate and it makes me wonder the reason why I hadn’t looked at this with this light before. Your article truly did turn the light on for me as far as this specific subject matter goes. Nevertheless there is one particular issue I am not necessarily too comfy with and whilst I attempt to reconcile that with the central theme of the position, permit me see what the rest of your visitors have to point out.Very well done.